Cancer Hospital 2
Laxmi Tai add
Beereshwara 33

*ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

Anvekar 3

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ, ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

*ವಾಹನ ದಟ್ಟಣೆ ನಿರ್ವಹಣೆಗೆ ಕ್ರಮ :*

Emergency Service

ಬೆಂಗಳೂರು ನಗರದ ವಾಹನ ದಟ್ಟಣೆ ನಿರ್ವಹಣೆಗಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉನ್ನತ ಮಟ್ಟದ ನಿರ್ವಹಣೆಗಾಗಿ ವಿಶೇಷ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಗಮ ಸಂಚಾರ ಹಾಗೂ ವಾಹನ ದಟ್ಟಣೆ ಕಡಿಮೆಗೊಳಿಸಲು ನೂತನ ತಂತ್ರಜ್ಞಾನದ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದರು.

 *6  ಹೊಸ ಸಂಚಾರ ಪೊಲೀಸ್ ಠಾಣೆ :*

ಎರಡು ಸಂಚಾರ ಪೊಲೀಸ್ ಠಾಣೆಯ ಅಂತರದಲ್ಲಿ ಉಂಟಾಗುವ ವಾಹನದಟ್ಟಣೆಯ ನಿರ್ವಹಣೆಗೆ ನಾಲ್ಕು ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ್ದು, 2023-24 ರಲ್ಲಿ 6  ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಗಾಗಿ 9 ಹೊಸ ಪೊಲೀಸ್ ಠಾಣೆಗಳನ್ನು ಮಾಡಲಾಗುವುದು ಎಂದರು.

ReplyForward
Gokak Jyotishi add 8-2
Bottom Add3
Bottom Ad 2