GIT add 2024-1
Laxmi Tai add
Beereshwara 33

ಭೀಕರ ಅಪಘಾತ: 10 ಜನರ ಸಾವು

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಮೈಸೂರು: ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಜನರು ಸಾವಿಗೀಡಾಗಿದ್ದಾರೆ.

ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿ ಅಪಘಾತ ನಡೆದಿದೆ. ಮೃತರೆಲ್ಲ ಬಳ್ಳಾರಿಯವರು ಎಂದು ಗೊತ್ತಾಗಿದೆ.

ಇನ್ನೋವಾ ಕಾರು ಬಸ್‌ಗೆ ಡಿಕ್ಕಿಯಾಗಿದ್ದು, ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇತರರು ಆಸ್ಪತ್ರೆಗೆ ಸಾಗಿಸುವಾಗಿ ಮೃತರಾಗಿದ್ದಾರೆ.

ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Emergency Service

ಅಪಘಾತ ಸುದ್ದಿ ಕೇಳಿ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ, ಪರಿಹಾರ ಘೋಷಿಸಿದ್ದಾರೆ.

https://pragati.taskdun.com/arrest-bjp-mp-immediately-siddaramaiah/

Bottom Add3
Bottom Ad 2